ಮನೆಗೆ ದಾರಿದ್ರ್ಯ ಬರಲು ನಾವು ತಿಳಿದು, ತಿಳಿಯದೆ ಮಾಡುವ ಈ 30 ತಪ್ಪುಗಳೇ ಕಾರಣ.

ಮನೆಗೆ ದಾರಿದ್ರ್ಯ ಬರಲು ನಾವು ತಿಳಿದು, ತಿಳಿಯದೆ ಮಾಡುವ ಈ 30 ತಪ್ಪುಗಳೇ ಕಾರಣ. 1) ಊಟ ಮಾಡುವಾಗ ಅನಾವಶ್ಯಕವಾಗಿ ಯೋಚನೆಗಳನ್ನು ಮಾಡಿ ತಟ್ಟೆಯ ಮುಂದೆ ಕಣ್ಣೀರು ಹಾಕುವುದು ಒಳ್ಳೆಯದಲ್ಲ. ಊಟ ಮಾಡುವಾಗ ನಿರಾಳ ಮನಸ್ಥಿತಿ ಇರಬೇಕು. 2) ಹೆಣ್ಣು ಮಕ್ಕಳು ತಟ್ಟೆಯನ್ನು ನೆಲದ ಮೇಲೆ ಇಟ್ಟು ಊಟವನ್ನು ಮಾಡದೆ ಬದಲಾಗಿ ತೊಡೆಯ ಮೇಲೆ ಇಟ್ಟುಕೊಂಡು ಊಟವನ್ನು ಮಾಡಬಾರದು. ಇದನ್ನು ರೋಗಿಗಳು, ದಿನದಟ್ಟರು ತೊಡೆ ಮೇಲೆ ಇಟ್ಟು ಊಟವನ್ನು ಮಾಡುತ್ತಾರೆ. ಆದ್ದರಿಂದ ಊಟದ ತಟ್ಟೆಯನ್ನು ನೆಲದ ಮೇಲೆ ಇಟ್ಟು ಕುಳಿತುಕೊಂಡು ಮಾಡಬೇಕು.

3) ಮನೆಯಲ್ಲಿ ಹಿರಿಯರಿಗೆ ಮತ್ತು ತಂದೆ ತಾಯಿಯರಿಗೆ ಕಾಲು ಮುಟ್ಟಿ ನಮಸ್ಕಾರ ಮಾಡುವ ಪದ್ಧತಿಯನ್ನು ಮಕ್ಕಳಲ್ಲಿ ಬೆಳೆಸಿ. ಹೆತ್ತವರಿಗೆ ಇದರ ಅವಶ್ಯಕತೆ ಇಲ್ಲದೆ ಇರಬಹುದು ಆದರೆ ಹೆತ್ತವರ ಆಶೀರ್ವಾದವು ಮಕ್ಕಳನ್ನು ನಿರಂತರ ರಕ್ಷಿಸಲು ಅತ್ಯಂತ ಸಹಕಾರಿ.4) ಹಿರಿಯರು ನಂಬಿಕೊಂಡು ಬಂದ ದೈವಗಳಿಗೆ, ಅವರದೇ ಆದ ಸಂಪ್ರದಾಯಗಳಿಗೆ ಗೌರವ ತೋರಿಸುವುದು ನಮ್ಮ ಆದ್ಯ ಕರ್ತವ್ಯ.

5) ನೀವು ಮಲಗುವ ಕೋಣೆಯಲ್ಲಿ ಕನ್ನಡಿ ಇಟ್ಟುಕೊಳ್ಳಬೇಡಿ. ಒಂದು ವೇಳೆ ಕನ್ನಡಿ ತೆಗೆದು ಹಾಕಲು ಸಾಧ್ಯವಿಲ್ಲವೆಂದಾದರೆ ನಿಮ್ಮ ಮುಖ ಕಾಣದಂತೆ ಕನ್ನಡಿಯನ್ನು ಬಟ್ಟೆಯಿಂದ ಮುಚ್ಚಿ. ರಾತ್ರಿ ಹೊತ್ತಿನಲ್ಲಿ ಕನ್ನಡಿ ನೋಡುವುದು ಅಷ್ಟು ಒಳ್ಳೆಯದಲ್ಲ. 6) ಆಹಾರ ಸೇವಿಸಿದ ನಂತರ ಎಂಜಲು ಮುಸುರೆಗಳನ್ನು ತುಂಬಾ ಕಾಲ ಹಾಗೆಯೇ ತೊಳೆಯದೆ ಇಡಬೇಡಿ.

7) ಸಾಧ್ಯವಾದಷ್ಟು ದೇವರಿಗೆ ಮನೆಯ ಹೂವುಗಳನ್ನೇ ಅರ್ಪಿಸಲು ಪ್ರಯತ್ನ ಮಾಡಿ. ಹೊರಗಡೆಯಿಂದ ತಂದ ಹೂವಿಗೆ ಮನೆಯ ನೀರನ್ನು ಸಿಂಪಡಿಸಿ ಶುದ್ಧ ಮಾಡಿ ನಂತರ ಉಪಯೋಗಿಸಬೇಕು. 8) ನಿಂತ ಗಡಿಯಾರವು ಅಶುಭ ಲಕ್ಷಣ. ಇದನ್ನು ಕೂಡಲೇ ಸರಿಪಡಿಸುವುದು ಉತ್ತಮ. 9) ಒಡೆದಿರುವ ಅಥವಾ ಬಿರುಕು ಬಿಟ್ಟಿರುವ ಕನ್ನಡಿ ಇಡಬೇಡಿ. ಅದು ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸುತ್ತದೆ.

10) ಯಾವುದೇ ಹೊಸ ಬಟ್ಟೆ ಅಥವಾ ಒಡವೆಗಳನ್ನು ತಂದರೆ ಮೊದಲು ದೇವರ ಸನ್ನಿಧಾನದಲ್ಲಿಟ್ಟು ತೆಗೆದುಕೊಳ್ಳಬೇಕು. 11) ಚಾಪೆ ಬಳಸುತ್ತಿದ್ದರೆ ಮುಗುಚಿ ಹಾಕಬಾರದು. 12) ಸಂಜೆ ಗುಡಿಸಿದ ಕಸವನ್ನು ಹೊರಗೆ ಹಾಕಬಾರದು. 13) ದೇವರ ಕೋಣೆಯಲ್ಲಿ ಒಂಟಿ ದೀಪ ಉರಿಸಬಾರದು. ಸಣ್ಣ ದೀಪವಾದರೂ ಅಡ್ಡಿಯಿಲ್ಲ ಎರಡು ದೀಪಗಳನ್ನು ಇಡಿ.

14) ಕುಲ ದೇವರಿಗೆ, ಇಷ್ಟ ದೇವರಿಗೆ ಮನೆಯ ಎಲ್ಲಾ ಶುಭಕಾರ್ಯಗಳಲ್ಲಿ ಕಾಣಿಕೆಯನ್ನು ತೆಗೆದು ಇಡುವುದನ್ನು ರೂಢಿ ಮಾಡಿ. 15) ಜೇಡರ ಬಲೆ ಮನೆಯಲ್ಲಿ ಕಟ್ಟಿದ್ದರೆ ತಕ್ಷಣ ನಿವಾರಿಸಿ. ಅದು ಅಶುಭ ತರುವ ಸಂಕೇತ. ಮನೆಯನ್ನು ಎಷ್ಟು ಶುಚಿಯಾಗಿ ಇಟ್ಟುಕೊಳ್ಳುತ್ತೇವೆ ಅಷ್ಟು ದೈವಿಕ ಕಳೆ ವೃದ್ಧಿಸುವುದು. 16) ಮನೆಯ ಯಾವುದೇ ಜಾಗದಲ್ಲಿ ಪಾರಿವಾಳಗಳು ಮನೆ ಮಾಡಿದರೆ ಅದು ಕಷ್ಟಗಳು ಎದುರಾಗುವ ಸಂಕೇತ. ಅವುಗಳ ಪ್ರಾಣ ಹಾನಿ ಆಗದಂತೆ ಅಲ್ಲಿಂದ ಓಡಿಸಬೇಕು.

17) ಜೇನಿನ ಗೂಡು ಮನೆಯಲ್ಲಿ ಕಟ್ಟಬಾರದು. ಸಾಧ್ಯವಾದಷ್ಟು ಮನೆಯೊಳಗೆ ಯಾವುದೇ ಜೀವಿಗಳಿಗೆ ಜೀವ ಹಾನಿ ಮಾಡಬೇಡಿ. 18) ಬಾವಲಿಗಳು ಮನೆಸರಹದ್ದಿನಲ್ಲಿ ವಾಸ ಮಾಡದಂತೆ ಎಚ್ಚರವಹಿಸಿ. 19) ಮನೆಯ ಯಾವುದೇ ಸ್ಥಳದ ನಲ್ಲಿ ನೀರು ನಿರಂತರ ಸೋರುವಿಕೆ ಇರಬಾರದು. ಅದರಿಂದ ಹಣ ಜಾಸ್ತಿ ಖರ್ಚಾಗುವ ಸಂಭವ ಇರುತ್ತದೆ.
20) ಉತ್ತರ ದಿಕ್ಕಿಗೆ ತಲೆ ಮಾಡಿ ಮಲಗಬಾರದು. ದಕ್ಷಿಣ ದಿಕ್ಕಿಗೆ ಮುಖ ಮಾಡಿ ನಿರಂತರ ಕುಳಿತುಕೊಳ್ಳುವ ವ್ಯವಸ್ಥೆ ಇರಬಾರದು.

21) ಬರೀ ನೆಲದಲ್ಲಿ ಮಲಗುವುದಾಗಲಿ, ಹರಿದ ವಸ್ತ್ರಗಳನ್ನು ಧರಿಸುವುದು ಮಾಡಬೇಡಿ. 22) ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪ ಬೆಳಗುವ ಅಭ್ಯಾಸ ರೂಢಿ ಮಾಡಿ. ಇದರಿಂದ ಮನೆಯಲ್ಲಿ ಸಾತ್ವಿಕ ವಾತಾವರಣ ವೃದ್ಧಿಯಾಗುತ್ತದೆ 23) ಆಗ್ನೇಯ ದಿಕ್ಕಿನಲ್ಲಿ ಅಂದರೆ ದಕ್ಷಿಣ ಮತ್ತು ಪೂರ್ವ ಮಧ್ಯದ ದಿಕ್ಕಿನಲ್ಲಿ ಅಡುಗೆ ಮನೆ ಇರಬೇಕು. ಅದು ಇಲ್ಲವೆಂದಾದಲ್ಲಿ ನಿಮ್ಮ ಅಡುಗೆ ಮನೆಯ ಆಗ್ನೇಯ ದಿಕ್ಕಿನಲ್ಲಿ ಗ್ಯಾಸ್ ಸ್ಟೌವ್ ನಾದರೂ ಇಡಬೇಕು.

24) ಅಡುಗೆ ಮನೆಯಲ್ಲಿ ಔಷಧಗಳನ್ನು ಇಡಬೇಡಿ. ಇದರಿಂದ ನೆಗೆಟಿವ್ ಎನರ್ಜಿ ವಕ್ಕರಿಸುವ ಅಪಾಯವಿರುತ್ತದೆ.
25) ದೇವರ ಕೋಣೆಯ ಮೇಲೆ ಅತಿಯಾದ ಭಾರವನ್ನು ಇಡಬಾರದು. ಒಡೆದು ಹೋದ ದೇವರ ಮೂರ್ತಿ ಅಥವಾ ಫೋಟೋಗಳನ್ನು ಇಡಬೇಡಿ. 26) ಮನೆಯ ಆವರಣದಲ್ಲಿ ಒಣಗಿದ ಗಿಡಗಳನ್ನು ಇಡಬೇಡಿ. ಇದರಿಂದ ಮನಸ್ಸಿನಲ್ಲಿ ಖಿನ್ನತೆ ಉಂಟಾಗುವ ಸಂಭವ ಇರುತ್ತದೆ. 27) ವರ್ಷಕ್ಕೆ ಒಮ್ಮೆಯಾದರೂ ಗಣ ಹೋಮವನ್ನು ಮಾಡಿದರೆ ತುಂಬಾ ಉತ್ತಮ. ಇದರಿಂದ ವಾಸ್ತು ಸದೃಢವಾಗಿರುತ್ತದೆ.

28) ವರ್ಷಕ್ಕೆ ಒಮ್ಮೆಯಾದರೂ (ಅತಿಥಿಸತ್ಕಾರ) ಪೂಜೆ ಮಾಡಿ ಯೋಗ್ಯರಿಗೆ ದಾನ ಮಾಡಿ. ಇದರಿಂದ ಸಂಪತ್ತು ದೈವಿಕ ರೂಪ ಪಡೆಯುತ್ತದೆ. 29) ಸಾಧ್ಯವಿದ್ದಲ್ಲಿ ನಿತ್ಯವೂ ಮನೆಯ ಸಮೀಪದ ದೇವಾಲಯ ದರ್ಶನ ಉತ್ತಮ.
30) ಸ್ನಾನವಿಲ್ಲದೆ ಊಟ ಮಾಡುವುದು ಒಳ್ಳೆಯದಲ್ಲ. ಏಕೆಂದರೆ ಅನ್ನವು ದೇವರಿಗೆ ಸಮಾನ.

ಗೆಳೆಯರೇ ನಿಮಗೆ ಸಮಯವಿಲ್ಲದಿದ್ದರೂ ಕೆಲವು ನಿಯಮಗಳನ್ನಾದರೂ ಪಾಲಿಸಿ. ತಾನಾಗಿಯೇ ಮನೆಯಲ್ಲಿ ಶಾಂತಿ, ನೆಮ್ಮದಿ ಸಿಗುತ್ತದೆ. ಹಣದಿಂದ ನಾವು ಏನೆಲ್ಲಾ ಕೊಂಡುಕೊಳ್ಳಬಹುದು. ಆದರೆ ಮನಸ್ಸಿಗೆ ಶಾಂತಿ, ನೆಮ್ಮದಿನೇ ಇಲ್ಲ. ಅದು ಸಿಗಬೇಕು ಅಂದರೆ ನಮ್ಮ ಪೂರ್ವಜರು ಹೇಳಿಕೊಟ್ಟ ಸಂಪ್ರದಾಯಗಳನ್ನು ಆಚರಿಸಿದಾಗ ಮಾತ್ರ ಸಾಧ್ಯ.

Leave a Comment